Please enable javascript.BBC Russian
Svoboda | Graniru | BBC Russia | Golosameriki | Facebook

ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು, ಚರ್ಚಿಸಿ ತೀರ್ಮಾನ ಎಂದ ಜಿ ಪರಮೇಶ್ವರ್

Edited byಇರ್ಷಾದ್ ಉಪ್ಪಿನಂಗಡಿ | Vijaya Karnataka Web 18 Jun 2024, 10:51 am
Subscribe

ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದಿದ್ದಕ್ಕೆ ಹೋಗಲು ಸಾಧ್ಯವಾಗಿಲ್ಲ. ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರ್ತೀನಿ ಎಂದು ತಿಳಿಸಿದರು. ಈ ಪ್ರಕರಣದ ತನಿಖೆಯ ಬಗ್ಗೆ ಅವರು ಮತ್ತಷ್ಟು ಮಾಹಿತಿಯನ್ನು ನೀಡಿದ್ದಾರೆ.

ಹೈಲೈಟ್ಸ್‌:

  • ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್
  • ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದಿದ್ದಕ್ಕೆ ಹೋಗಲು ಸಾಧ್ಯವಾಗಿಲ್ಲ
  • ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರ್ತೀನಿ ಎಂದು ತಿಳಿಸಿದ ಅವರು, ಈ ಪ್ರಕರಣದ ತನಿಖೆಯ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನೀಡಿದ್ದಾರೆ
DARSHAN
ಬೆಂಗಳೂರು: ನಟ ದರ್ಶನ್ ತೂಗುದೀಪ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದಿದ್ದಕ್ಕೆ ಹೋಗಲು ಸಾಧ್ಯವಾಗಿಲ್ಲ. ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರ್ತೀನಿ ಎಂದರು.

ಇನ್ನು ಹತ್ಯೆಗೊಳಗಾದ ರೇಣುಕಾಸ್ವಾಮಿ ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ನೀಡುವ ಬಗ್ಗೆ, ತನಿಖೆ ನಡೆದ ಬಳಿಕ ಆರ್ಥಿಕ ನೆರವು ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರದಿಂದ ನೆರವು ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು.

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಬಿರಿಯಾನಿ! ಊಟ ಕೊಡದೆ ಸಾಯಿಸೋಕಾಗುತ್ತಾ ಎಂದ ಪರಮೇಶ್ವರ್
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣಗೆ ನೋಟಿಸ್‌ ವಿಚಾರವಾಗಿ ಮಾತನಾಡಿ, ಸಿನಿಮಾ ನಟರು ಆಗಿರೋದ್ರಿಂದ ಎಲ್ಲಾರು ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರ್ತಾರೆ. ಸಾಕ್ಷ್ಯಾಧಾರಗಳ ಮೇಲೆ ತನಿಖೆ ಮುಂದುವರೆಯುತ್ತೆ. ಯಾರಾದ್ರೂ ಇದರಲ್ಲಿ ಭಾಗಿಯಾಗಿದ್ದರೆ ಅವ್ರನ್ನೂ ತನಿಖೆ ಮಾಡಲಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಆಪ್ತೆ ಪವಿತ್ರಾ ಗೌಡ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿತ್ತು. ಈ ಸಂದರ್ಭದಲ್ಲಿ ರೇಣುಕಾಸ್ವಾಮಿ ಸಾವಾಗಿದೆ. ಈ ಪ್ರಕರಣ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ದರ್ಶನ್ ಸೇರಿದಂತೆ 19 ಜನರು ಬಂಧನದಲ್ಲಿದ್ದಾರೆ.


ಪೆಟ್ರೋಲ್ ದರ ಏರಿಕೆ ಪ್ರತಿಭಟನೆ ಎದುರಿಸುತ್ತೇವೆ


ಪಿಎಸ್ ಐ ನೇಮಕಾತಿ ಅಂತಿಮ ಹಂತದಲ್ಲಿದೆ. ಟೆಕ್ಷಿಕಲ್ ಪ್ರಶ್ನೆಗಳನ್ನ ತೆಗೆದಿದ್ದಾರೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರೊಟೆಸ್ಟ್ ವಿಚಾರವಾಗಿ, ಪ್ರತಿಭಟನೆ ಮಾಡೋದು ಅವರ ಹಕ್ಕು. ಬಿಜೆಪಿಯವರು ಪ್ರತಿಯೊಂದರಲ್ಲೂ ರಾಜಕಾರಣ ಮಾಡ್ತಾರೆ. 14 ಬಾರಿ ಅವ್ರು ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದಾರೆ. ಕಚ್ಚಾತೈಲ ಬ್ಯಾರಲ್ ಕಡಿಮೆ ಇದ್ರೂ ಜಾಸ್ತಿ ಮಾಡಿದ್ರು. ಅದನ್ನ ಬಿಜೆಪಿಯವ್ರು ನೆನಪಿಟ್ಟುಕೊಳ್ಳಲಿ. ಅವರ ಪ್ರತಿಭಟನೆ ಮಾಡಲಿ ನಾವು ಎದುರಿಸ್ತೀವಿ ಎಂದರು.
ಇರ್ಷಾದ್ ಉಪ್ಪಿನಂಗಡಿ
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ